Wednesday, March 26, 2008

ಅವರು ಹೀಗಂದರು

"ದಿನದ ಬ್ಲಾಗ್ - ಸ್ವರಚಿತ

ಕನ್ನಡದ ಬ್ಲಾಗ್ ಬಾನಿನ ಈ ದಿನದ ಚುಕ್ಕಿ, ತೋರಿಸುತ್ತಾರೆ ಬ್ಲಾಗಿನಿ.
ಇಂದಿನ ಬ್ಲಾಗ್ ಬೊಗಸೆಯಲ್ಲಿ ಉಡುಪಿಯ ಷಣ್ಮುಖರಾಜ ಅವರ ಸ್ವರಚಿತ ಎಂಬ ಹೂಗುಚ್ಛ. ತಂತ್ರಜ್ಞಾನ ಕ್ಷೇತ್ರದಲ್ಲಿದ್ದುಕೊಂಡು ಕನ್ನಡದ ದೋಣಿಯಲ್ಲಿ ಹೊರಟ ಇನ್ನೊಂದು ಭಾವಯಾನವಿಲ್ಲಿದೆ. ನಾನು ಬೇರೇವ್ರ ತರಾ ಅಲ್ಲ, ಬನ್ನಿ ಹರಟೆಹೊಡೆಯೋಣ, ಓದಿ, ಓದಿಸಿ ಲೈಫ್ ನಿಮ್ಮದಾಗಿಸಿಕೊಳ್ಳಿ ಅಂತ ಟಿಪಿಕಲ್ ಮ್ಯಾನೇಜ್‌ಮೆಂಟ್ ಗುರು ತರಹ ಪರಿಚಯ ಹೇಳಿಕೊಂಡಿರುವ ಈ ಲೇಖಕರ ಬರಹಗಳು ಸುಲಭ ಕನ್ನಡದ ಲಘು ಓದಿಗೆ ಒದಗುತ್ತವೆ.

ಇತ್ತೀಚಿನ ಕವನ ಉಪದೇಶದಲ್ಲಿ ಓರಗೆಯವರಿಗೆ [?] ಉಪದೇಶ ಹೇಳಿದ್ದಾರೆ. ಪಾಡ್ ಕ್ಯಾಸ್ಟ್ಗಳು, ಹನಿಗವನಗಳು, ಹನಿಗತೆಗಳು, ಹರಟೆ. ಈ ಎಲ್ಲವನ್ನೂ ಬಳಸಿ ತಮ್ಮ ಮನದ ಲವಲವಿಕೆಯನ್ನು ಓದುಗರೊಡನೆ ಹಂಚಿಕೊಂಡಿದ್ದಾರೆ. ಹಕ್ಕಿಹಾಡು, ಹಳ್ಳಿಗೀತ, ಅವಳ ಕತೆ, ಹೋಳಿ ಶುಭಾಶಯ, ಆಲಮಟ್ಟಿ, ಉಪದೇಶ, ಹೀಗೆ ಸುಮ್ಮನೆ, ಗುಬ್ಬಚ್ಚಿ ಗೂಡಿನಲ್ಲಿ, ಮಾಯದ ಕಂಗಳ ಚೆಲುವೆ ಕೇಳು, ಬೆಟ್ಟದಾ ಮ್ಯಾಲೊಂದು ಟೆಂಟು ಹಾಕಿ, ಕೇಕು ಪುರಾಣ, ನನ್ ಮೇಸ್ಟ್ರು, ದೇವರೊಬ್ಬ ನಾಮ ಹಲವು, ತಾರೆ ಭುವಿಯ ಮ್ಯಾಲೆ, ಮೊದಲಾದ ಬರಹಗಳು ಓದಲು ಖುಶಿ ಕೊಡುತ್ತವೆ."

Ref: http://www.kendasampige.com/preview/?page_id=176

ಒಂದಂತು ನಿಜ.. ನಿಮ್ ಕುಶೀನೇ ನಮ್ ಕುಶಿ!

No comments: